Updates
ಶ್ರೀ ರಾಮಕುಂಜೇಶ್ವರ ಆಂಗ್ಲ ಮಾಧ್ಯಮ ಪ್ರೌಢಶಾಲೆಯಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣೆ
Date: 23-08-2022
ಶ್ರೀ ರಾಮಕುಂಜೇಶ್ವರ ಆಂಗ್ಲ ಮಾಧ್ಯಮ ಪ್ರೌಢಶಾಲೆಯಲ್ಲಿ ಮಕ್ಕಳಿಗೆ ಶ್ರೀ ಕೃಷ್ಣ ಜನ್ಮಾಷ್ಟಮಿ ಕಾರ್ಯಕ್ರಮವು ಪ್ರಾತ್ಯಕ್ಷಿಕೆ ಮೂಲಕ ನಡೆಯಿತು. ಈ ಕಾರ್ಯಕ್ರಮವನ್ನು ಸಂಸ್ಥೆಯ ಕಾರ್ಯದರ್ಶಿಗಳಾದ ಶ್ರೀಯುತ ಕೆ ಸೇಸಪ್ಪ ರೈ ಇವರು ಉದ್ಘಾಟಿಸಿ ಹಬ್ಬದ ಆಚರಣೆಯ ಕುರಿತಾಗಿ ಕಿರು ಸಂದೇಶವನ್ನು ಮಕ್ಕಳಿಗೆ ನೀಡಿದರು. ಸಭೆಯಲ್ಲಿ ಆಡಳಿತಾಧಿಕಾರಿ ಶ್ರೀ ಆನಂದ ಎಸ್ ಟಿ, ಪ್ರೌಢಶಾಲೆಯ ಮುಖ್ಯಗುರುಗಳಾದ ಶ್ರೀಮತಿ ಗಾಯತ್ರಿ ಯು ಎನ್, ಪ್ರಾಥಮಿಕ ಶಾಲೆಯ ಮುಖ್ಯಗುರುಗಳಾದ ಲೋಹಿತ ಕೆ, ಸಂಸ್ಥೆಯ ವ್ಯವಸ್ಥಾಪಕರಾದ ಶ್ರೀ ರಮೇಶ್ ರೈ, ಕಾರ್ಯಕ್ರಮ ಸಂಘಟಕರಾದ ಶ್ರೀಮತಿ […]
75 ನೇ ಸ್ವಾತಂತ್ರ್ಯೋತ್ಸವ ದಿನಾಚರಣೆ
Date: 17-08-2022
ಶ್ರೀ ರಾಮಕುಂಜೇಶ್ವರ ಆಂಗ್ಲ ಮಾಧ್ಯಮ ಪ್ರೌಢಶಾಲೆ ಇಲ್ಲಿ 75 ನೇ ಸ್ವಾತಂತ್ರ್ಯೋತ್ಸವದ ದಿನಾಚರಣೆಯನ್ನು ವಿಜ್ರಂಭಣೆಯಿಂದ ಆಚರಿಸಲಾಯಿತು. ಹಿರಿಯ ನಿವೃತ್ತ ಶಿಕ್ಷಕರಾದ ಶ್ರೀಯುತ ಚಂದ್ರಹಾಸ ರೈ ಮುಖ್ಯ ಅತಿಥಿಗಳಾಗಿ ಧ್ವಜಾರೋಹಣಗೈದು, ರಾಷ್ಟ್ರಧ್ವಜದ ಮಹತ್ವದ ಬಗ್ಗೆ ಸವಿವರವಾಗಿ ಮಾಹಿತಿ ನೀಡಿದರು. ಸಂಸ್ಥೆಯ ಕಾರ್ಯದರ್ಶಿ ಶ್ರೀಯುತ ಕೆ ಸೇಸಪ್ಪ ರೈಯವರು ಅಧ್ಯಕ್ಷತೆ ವಹಿಸಿ ವಿದ್ಯಾರ್ಥಿಗಳಲ್ಲಿ ರಾಷ್ಟ್ರಪ್ರೇಮ, ರಾಷ್ಟ್ರಭಕ್ತಿ, ರಾಷ್ಟ್ರರಕ್ಷಣೆಯು ವಿದ್ಯಾರ್ಥಿ ದೆಸೆಯಲ್ಲಿ ಬೆಳೆಸಿಕೊಳ್ಳಬೇಕೆಂದು ತಿಳಿಸಿದರು. ಸ್ವಾತಂತ್ರ್ಯೋತ್ಸವದ ಪ್ರಯುಕ್ತ ವಿದ್ಯಾರ್ಥಿಗಳಿಗೆ ನಡೆಸಲಾದ ಸಾಂಸ್ಕøತಿಕ ಹಾಗೂ ಆಟೋಟ ಸ್ಪರ್ಧೆಗಳ ವಿಜೇತರಿಗೆ ಬಹುಮಾನ ವಿತರಿಸಲಾಯಿತು. ಪ್ರಾಥಮಿಕ […]
ಭಾರತ್ ಸ್ಕೌಟ್ಸ್, ಗೈಡ್ಸ್ ಪರೀಕ್ಷೆ: 13 ವಿದ್ಯಾರ್ಥಿಗಳಿಗೆ ಗೋಲ್ಡನ್ ಆ್ಯರೋ ಪ್ರಶಸ್ತಿ
Date: 11-08-2022
ಭಾರತ್ ಸ್ಕೌಟ್ಸ್, ಗೈಡ್ಸ್ ಪರೀಕ್ಷೆ: ರಾಮಕುಂಜ ಆಂಗ್ಲ ಮಾಧ್ಯಮ ಶಾಲೆಯ 13 ವಿದ್ಯಾರ್ಥಿಗಳಿಗೆ ಗೋಲ್ಡನ್ ಆ್ಯರೋ ಪ್ರಶಸ್ತಿ ರಾಮಕುಂಜ: 2021-22 ನೇ ಸಾಲಿನ ಭಾರತ್À ಸ್ಕೌಟ್ಸ್ ಮತ್ತು ಗೈಡ್ಸ್ನ ಗೋಲ್ಡನ್ ಆ್ಯರೋ ಪರೀಕ್ಷೆಯಲ್ಲಿ ಶ್ರೀ ರಾಮಕುಂಜೇಶ್ವರ ಆಂಗ್ಲ ಮಾಧ್ಯಮ ಶಾಲೆ ರಾಮಕುಂಜದ 13 ವಿದ್ಯಾರ್ಥಿಗಳು ಉತ್ತೀರ್ಣರಾಗಿ ಗೋಲ್ಡನ್ ಆ್ಯರೋ ಪುರಸ್ಕಾರಕ್ಕೆ ಆಯ್ಕೆಯಾಗಿದ್ದಾರೆ. ಕಬ್ ವಿಭಾಗದಲ್ಲಿ ಛಾಯಾಸ್ವರೂಪ್ ಎ ಜಿ, ಅದ್ವಿತ್ ರೈ, ಸುಮುಖ ಎಸ್, ಹಾಗೂ ಶ್ರೇಷ್ಠ ಪಿ ವಿ. ಬುಲ್ ಬುಲ್ ವಿಭಾಗದಲ್ಲಿ ತನ್ವಿ, ಎನ್ […]
ಚೆಸ್ ಸ್ಪರ್ಧೆ
Date: 26-07-2022
ದಿನಾಂಕ 13/07/2022ರಂದು ಶ್ರೀ ರಾಮಕುಂಜೇಶ್ವರ ಕನ್ನಡ ಮಾಧ್ಯಮ ಪ್ರೌಢಶಾಲೆಯಲ್ಲಿ ನಡೆದ ವೃತ್ತ ಮಟ್ಟದ ಚೆಸ್ ಪಂದ್ಯಾಟದಲ್ಲಿ ಭಾಗವಿಹಿಸಿ, 25/07/2022ರಂದು ಸ. ಹಿ. ಪ್ರಾ ಶಾಲೆ ಕುಟ್ರುಪ್ಪಾಡಿ ಪುತ್ತೂರು ಇಲ್ಲಿ ನಡೆಯುವ ತಾಲೂಕು ಮಟ್ಟದ ಚೆಸ್ ಪಂದ್ಯಾಟಕ್ಕೆ ಲೋಹಿತ್(10ನೇ) ಅಮೋಘ ಯು ಕೆ (10ನೇ) ನಿತಿನ್ ಎಂ (8ನೇ) ಆಯ್ಕೆಯಾಗಿರುತ್ತಾರೆ.
ಕರಾಟೆ ಸ್ಪರ್ಧೆ
Date: 26-07-2022
ದಿನಾಂಕ 22/07/2022ರಂದು ಸಂತ ವಿಕ್ಟರನಾ ಬಾಲಿಕಾ ಪ್ರೌಢಶಾಲೆ ಪುತ್ತೂರು ಇಲ್ಲಿ ಜರುಗಿದ ಪುತ್ತೂರು ತಾಲೂಕು ಮಟ್ಟದ ಕರಾಟೆ ಪಂದ್ಯಾಟದಲ್ಲಿ ನಮ್ಮ ಸಂಸ್ಥೆಯ ನಿರಂಜನ್ ಎನ್ ಜಿ. (9ನೇ) ಭವಿಷ್ ಎಮ್ ಎಸ್ (8ನೇ) ಮನ್ವಿತ್ ಸಿ (8ನೇ) ಕ್ರಮವಾಗಿ ಪ್ರಥಮ ದ್ವಿತೀಯ ಮತ್ತು ತೃತೀಯ ಸ್ಥಾನವನ್ನು ಪಡೆದುಕೊಂಡರು. ನಿರಂಜನ್ ಎನ್ ಜಿ. ಇವನು ದಿನಾಂಕ 27/07/2022 ರಂದು ವಾಣಿ ಆಂಗ್ಲ ಮಾಧ್ಯಮಶಾಲೆ ಬೆಳ್ತಂಗಡಿ ಇಲ್ಲಿ ನಡೆಯುವ ಜಿಲ್ಲಾ ಮಟ್ಟದ ಕರಾಟೆ ಸ್ಪರ್ದೆಗೆ ಆಯ್ಕೆಯಾಗಿರುತ್ತಾನೆ.
ಶ್ರೀ ರಾಮಕುಂಜೇಶ್ವರ ಆಂಗ್ಲ ಮಾಧ್ಯಮ ಪ್ರೌಢಶಾಲೆ ರಾಮಕುಂಜ ಶಾಲಾ ಮಂತ್ರಿಮಂಡಲದ ಉದ್ಘಾಟಣೆ
Date: 26-07-2022
ದಿನಾಂಕ 22/07/2022ರಂದು ಶ್ರೀ ಚಂದ್ರಶೇಖರ್ ಪ್ರಾಂಶುಪಾಲರು ಪದವಿ ಪೂರ್ವ ಕಾಲೇಜು ರಾಮಕುಂಜ ಇವರು ಶಾಲಾ ಮಂತ್ರಿಮಂಡಲವನ್ನು ದೀಪ ಬೆಳಗಿಸಿ ಉದ್ಘಾಟಸಿದರು. ವಿದ್ಯಾರ್ಥಿಗಳು ನಾಯಕತ್ವ ಗುಣವನ್ನು ಬೆಳೆಸುವುದರ ಜೊತೆಗೆ ಪ್ರಜಾಪ್ರಭುತ್ವ ವ್ಯವಸ್ಥೆಯ ಚೌಕಟ್ಟಿನಲ್ಲಿ ದೇಶದ ಉತ್ತಮ ಪ್ರಜೆಯಾಗಬೇಕೆಂದು ತಿಳಿಸಿದರು. ಸಂಸ್ಥೆಯ ಕಾರ್ಯದರ್ಶಿ ಶ್ರೀಯುತ ಕೆ ಸೇಸಪ್ಪ ರೈ ಇವರು ಅಧ್ಯಕ್ಷತೆ ವಹಿಸಿ, ವಿದ್ಯಾರ್ಥಿ ಸಂಘವು ಸಕ್ರಿಯವಾಗಿ ಕಾರ್ಯನಿರ್ವಹಿಸುವುದರ ಜೊತೆಗೆ ಪ್ರತಿ ತಿಂಗಳು ಅಧಿವೇಶನ ನಡೆಸುವಂತೆ ವಿದ್ಯಾರ್ಥಿಗಳಿಗೆ ಕಿವಿಮಾತು ನುಡಿದರು. ಶಿಕ್ಷಕ-ರಕ್ಷಕ ಸಂಘದ ಅಧ್ಯಕ್ಷರಾದ ಶ್ರೀಯುತ ಬಿ. ಎಲ್ ಜನಾರ್ದನರವರು […]